ಮಂಗಳವಾರ, ನವೆಂಬರ್ 1, 2016

ಶ್ರೀ ರಾಮಾಯಣ ದರ್ಶನಂ - ಕುವೆಂಪು

ಶ್ರೀ ರಾಮಾಯಣ ದರ್ಶನಂ - ಕುವೆಂಪು

ಶೀರ್ಷಿಕೆ: ಶ್ರೀ ರಾಮಾಯಣ ದರ್ಶನಂ
ಲೇಖಕರು: ಕುವೆಂಪು
ಮೊದಲ ಆವೃತ್ತಿ ಪ್ರಕಾಶಕರು: ಉದಯ ರವಿ ಪ್ರಕಾಶನ, ವಾಣೀವಿಲಾಸಪುರಂ, ಮೈಸೂರು.
(ಸರ್ಕಾರದ ವಿಶೇಷ ಅನುದಾನದಿಂದ ರಿಯಾಯಿತಿ ದರದಲ್ಲಿ ಪ್ರಕಟಿಸಿದೆ)

ಪುಸ್ತಕ ಕುರಿತು: ರಾಷ್ಟ್ರಕವಿ ಕುವೆಂಪು ಅವರ ಮಹಾಕಾವ್ಯ 'ಶ್ರೀ ರಾಮಾಯಣ ದರ್ಶನಂ' ಕನ್ನಡ ಸಾರಸ್ವತ ಪ್ರಪಂಚದ ಮಹಾಸಿದ್ಧಿಗಳಲ್ಲಿ ಒಂದು. 'ಮಹಾಕಾವ್ಯ'ದ ಕಾಲ ಮುಗಿದುಹೋಯಿತು ಎನ್ನುವವರಿಗೆ ಒಂದು ಸವಾಲಾಗಿ, ಮಹತ್ತಾದುದಕ್ಕೆ ಕಾಲದ ಕಟ್ಟಲ್ಲವೆನ್ನುವುದಕ್ಕೆ ಒಂದು ಸಾಕ್ಷಿಯಾಗಿ 'ರಾಮಾಯಣ ದರ್ಶನಂ' ಸೃಷ್ಟಿಯಾಗಿದೆ. ಹಳೆಯ ಕಥೆ ಯುಗಧರ್ಮವನ್ನು ಮೈಗೂಡಿಸಿಕೊಂಡು ಎಷ್ಟರ ಮಟ್ಟಿಗೆ ಹೊಸದಾಗಬಹುದೆಂಬುದಕ್ಕೆ ಈ ಮಹಾಕಾವ್ಯ ಉಜ್ವಲ ಉದಾಹರಣೆಯಾಗಿದೆ. ಇದಕ್ಕೆ ಭಾರತೀಯ ಸಾಹಿತ್ಯದಲ್ಲಿಯೆ ಒಂದು ಅನನ್ಯವಾದ ಸ್ಥಾನವಿದೆ. ಈ ಮಹಾಕಾವ್ಯಕ್ಕೆ ಬಗೆಬಗೆಯಾದ ಗೌರವಗಳು ಹೊರಕಿವೆ. ಸಾಹಿತ್ಯ ಅಕಾಡೆಮಿಯ ಬಹುಮಾನಕ್ಕೆ ಪಾತ್ರವಾದ ಮೊದಲ ಕನ್ನಡ ಗ್ರಂಥ ಇದು; ರಾಷ್ಟ್ರದ ಅತ್ಯುಚ್ಛ ಸಾಹಿತ್ಯ ಗೌರವವಾದ ಭಾರತೀಯ ಜ್ಞಾನಪೀಠ ಪ್ರಶಸ್ತಿಯನ್ನೂ ಪಡೆಯಿತು - ಹಾ. ಮಾ. ನಾಯಕ, ನಿರ್ದೇಶಕರು, ಕನ್ನಡ ಅಧ್ಯಯನ ಸಂಸ್ಥೆ, ಮೈಸೂರು (ಏಪ್ರಿಲ್ 4, 1971).


ಕನ್ನಡ ರಾಜ್ಯೋತ್ಸವ ನಾಡಹಬ್ಬದ ಶುಭದಿನದಂದು ಸಮಸ್ತ ಕನ್ನಡಿಗರಿಗೆ ಹೃತ್ಪೂರ್ವಕ ಶುಭಾಶಯಗಳು.

ಕೃಪೆ: YouTube

2011ರ ನವಂಬರ್ ನಿಂದ ಪ್ರಾರಂಭಗೊಂಡ ಕಹಳೆ ಕಾರ್ಯಕ್ರಮಕ್ಕೆ ಈಗ ಆರರ ಸಂಭ್ರಮ; ಕನ್ನಡಿಗರೆಲ್ಲರಿಂದ ದೊರೆತಿರುವ ಅಪೂರ್ವ ಸಹಕಾರ-ಪ್ರೋತ್ಸಾಹಕ್ಕೆ ನಾವು ಆಭಾರಿ. ತಮಗೆಲ್ಲರಿಗೂ ತಿಳಿದಿರುವಂತೆ, ಕನ್ನಡ ಪುಸ್ತಕಗಳ ಬಗೆಗೆ ಹೆಚ್ಚಿನ ಆಸಕ್ತಿ ಮೂಡಿಸುವುದೂ ಸಹ ಕಹಳೆ ಕಾರ್ಯಕ್ರಮದ ಪ್ರಮುಖ ಉದ್ದೇಶಗಳಲ್ಲೊಂದಾಗಿದೆ. ಸಾಗರದಂತೆ ವಿಶಾಲವಾಗಿರುವ ಶ್ರೀಮಂತ ಕನ್ನಡ ಸಾಹಿತ್ಯಿಕ ಸಂಪತ್ತಿನಿಂದ ಕೆಲವು ಪುಸ್ತಕ ಮಣಿರತ್ನಗಳನ್ನು ಆರಿಸಿ, ಈ ಕಾರ್ಯಕ್ರಮದಲ್ಲಿ ಪರಿಚಯಿಸುವ ಅಭಿಲಾಷೆಯೊಂದಿಗೆ ಆರನೇ ಕಹಳೆ ಆವೃತ್ತಿಯನ್ನು ಸಮಸ್ತ ಕನ್ನಡಿಗರ ಪರವಾಗಿ ಮಾತೃಸ್ವರೂಪಿಯಾದ ಕನ್ನಡಾಂಬೆಗೆ ಶ್ರದ್ಧಾಪೂರ್ವಕವಾಗಿ ಸಮರ್ಪಿಸುತ್ತಿದ್ದೇವೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ