ಮಂಗಳವಾರ, ನವೆಂಬರ್ 26, 2019

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರು

ಚಿತ್ರ ಕೃಪೆ: ವಿಕಿ ಮೀಡಿಯ

1. ರಾಷ್ಟ್ರಕವಿ ಕುವೆಂಪು: ಕುವೆಂಪು ಅವರ ಪೂರ್ಣ ಹೆಸರು ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಹಿರೇಕೋಡಿಗೆ ಎಂಬಲ್ಲಿ ಡಿಸೆಂಬರ್ 29, 1904 ರಲ್ಲಿ ಜನಿಸಿದರು. ತಂದೆ ವೆಂಕಟಪ್ಪಗೌಡ, ತಾಯಿ ಸೀತಮ್ಮ. ಅವರ ಬಾಲ್ಯ ತಮ್ಮ ತಂದೆಯ ಊರಾದ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಕುಪ್ಪಳ್ಳಿಯಲ್ಲಿ ಕಳೆಯಿತು. ಇವರ "ಶ್ರೀ ರಾಮಾಯಣ ದರ್ಶನಂ" ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ 1967ರಲ್ಲಿ ಜ್ಞಾನಪೀಠ ಪ್ರಶಸ್ತಿ ನೀಡಿ ಗೌರವಿಸಿತು. 

2. ದ. ರಾ. ಬೇಂದ್ರೆ: ಬೇಂದ್ರೆ ಅವರ ಪೂರ್ಣ ಹೆಸರು ದತ್ತಾತ್ರೇಯ ರಾಮಚಂದ್ರ ಬೇಂದ್ರೆ. ಅವರು 1896ನೇ ಜನವರಿ 31ರಂದು ಜನಿಸಿದರು. ತಂದೆ ರಾಮಚಂದ್ರ ಭಟ್ಟ, ತಾಯಿ ಅಂಬಿಕೆ ಅಂಬವ್ವ. ಬೇಂದ್ರೆಯವರ ಕಾವ್ಯನಾಮ "ಅಂಬಿಕಾತನಯದತ್ತ". ಬೇಂದ್ರೆ ಮನೆತನದ ಮೂಲ ಹೆಸರು ಠೋಸರ. ಇವರಿಗೆ 1973ರಲ್ಲಿ "ನಾಕು ತಂತಿ" ಕೃತಿಗೆ ಜ್ಞಾನಪೀಠ ಪ್ರಶಸ್ತಿ ದೊರೆತಿದೆ.

3. ಶಿವರಾಮ ಕಾರಂತ: ಕಾರಂತರವರ ಪೂರ್ಣ ಹೆಸರು ಕೋಟ ಶಿವರಾಮ ಕಾರಂತ. ಅವರು 1902ರ ಅಕ್ಟೋಬರ್ 10ರಂದು ಜನಿಸಿದರು. ಅವರು ದಕ್ಷಿಣ ಕನ್ನಡ ಜಿಲ್ಲೆಯ ಕೋಟದಲ್ಲಿ ಜನಿಸಿದರು. ತಂದೆ ಶೇಷ ಕಾರಂತ, ತಾಯಿ ಲಕ್ಷ್ಮಮ್ಮ. ಕಾರಂತರಿಗೆ 1977ರಲ್ಲಿ "ಮೂಕಜ್ಜಿಯ ಕನಸುಗಳು" ಕೃತಿಗೆ ಜ್ಞಾನಪೀಠ ಪ್ರಶಸ್ತಿ ದೊರೆತಿದೆ.

4. ಮಾಸ್ತಿ ವೆಂಕಟೇಶ ಅಯ್ಯಂಗಾರ್: ಇವರು ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ಮಾಸ್ತಿ ಗ್ರಾಮದಲ್ಲಿ ಜೂನ್ 6 1891ರಂದು ಜನಿಸಿದರು. ತಂದೆ ರಾಮಸ್ವಾಮಿ ಅಯ್ಯಂಗಾರ್, ತಾಯಿ ತಿರುಮಲಮ್ಮ. "ಶ್ರೀನಿವಾಸ" ಮಾಸ್ತಿಯವರ ಕಾವ್ಯನಾಮ. ಮಾಸ್ತಿ ಅವರ "ಚಿಕವೀರ ರಾಜೇಂದ್ರ" ಎಂಬ ಕಾದಂಬರಿಗೆ 1983ರಲ್ಲಿ ಜ್ಞಾನಪೀಠ ಪ್ರಶಸ್ತಿ ದೊರೆತಿದೆ.

5. ವಿ. ಕೃ. ಗೋಕಾಕ್: ಇವರ ಪೂರ್ಣ ಹೆಸರು ವಿನಾಯಕ ಕೃಷ್ಣ ಗೋಕಾಕ್. 1909ರ ಆಗಸ್ಟ್ 9ರಂದು ಅವಿಭಜಿತ ಧಾರವಾಡ ಜಿಲ್ಲೆಯ ಸವಣೂರು ಎಂಬಲ್ಲಿ ಜನಿಸಿದರು. ತಂದೆ ಕೃಷ್ಣ ಗೋಕಾಕ್ ವಕೀಲರಾಗಿದ್ದರು, ತಾಯಿ ಸುಂದರಮ್ಮ. 1990 ರಲ್ಲಿ ಇವರಿಗೆ ಜ್ಞಾನಪೀಠ ಪ್ರಶಸ್ತಿ ಲಭಿಸಿದೆ.

6. ಯು. ಆರ್. ಅನಂತಮೂರ್ತಿ: ಇವರು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಲ್ಲೂಕಿನ ಮಳಿಗೆ ಹಳ್ಳಿಯಲ್ಲಿ, 1932ರ ಡಿಸೆಂಬರ್ 21ರಂದು. ತಂದೆ ಉಡುಪಿ ರಾಜಗೋಪಾಲಾಚಾರ್ಯ, ತಾಯಿ ಸತ್ಯಮ್ಮ. ಇಂಗ್ಲೀಷ್ ಪ್ರಾಧ್ಯಾಪಕರಾಗಿ ತಮ್ಮ ವೃತ್ತಿ ಜೀವನ ಪ್ರಾಂರಂಭಿಸಿದ ಇವರಿಗೆ 1994 ರಲ್ಲಿ ಜ್ಞಾನಪೀಠ ಪ್ರಶಸ್ತಿ ದೊರೆತಿದೆ.

7. ಗಿರೀಶ್ ಕಾರ್ನಾಡ್: ಇವರು 1938 ಮೇ 19ರಂದು ಮಹಾರಾಷ್ಟ್ರದ ಮಾಥೇರಾನದಲ್ಲಿ ಜನಿಸಿದರು. ತಂದೆ ರಘುನಾಥ ಕಾರ್ನಾಡ ಮುಂಬೈನಲ್ಲಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದರು. ತಾಯಿ ಕೃಷ್ಣಾಬಾಯಿ. ಇವರಿಗೆ 1998ರಲ್ಲಿ ಜ್ಞಾನಪೀಠ ಪ್ರಶಸ್ತಿ ದೊರೆತಿದೆ.

8. ಚಂದ್ರಶೇಖರ ಕಂಬಾರ: ಇವರು ಜನವರಿ 2 1937ರಲ್ಲಿ ಬೆಳಗಾವಿ ಜಿಲ್ಲೆಯ ಘೋಡಿಗೇರಿ ಗ್ರಾಮದಲ್ಲಿ ಜನಿಸಿದರು. ತಂದೆ ಬಸವಣ್ಣೆಪ್ಪ ಕಂಬಾರ ಮತ್ತು ತಾಯಿ ಚೆನ್ನಮ್ಮ. ಇವರಿಗೆ 2010ರಲ್ಲಿ ಜ್ಞಾನಪೀಠ ಪ್ರಶಸ್ತಿ ದೊರೆತಿದೆ.

ವಿದ್ಯಾರ್ಥಿ ಕಿರುಪರಿಚಯ
ಸ್ನೇಹ, ಆರ್.

7ನೇ ತರಗತಿ
ಜ್ಯೋತಿ ವಿದ್ಯಾಲಯ ಶಿಕ್ಷಣ ಸಂಸ್ಥೆ,
ಹೆಸರಘಟ್ಟ, ಬೆಂಗಳೂರು ಉತ್ತರ ತಾಲ್ಲೂಕು, ಬೆಂಗಳೂರು ನಗರ ಜಿಲ್ಲೆ.

Blog  |  Facebook  |  Twitter

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ