ಜನ ಸಾಮಾನ್ಯರ ಅನುಭವದ ಸಾರವೇ ಗಾದೆಗಳು.
ಗಾದೆಗಳು:
- ವೇದ ಸುಳ್ಳಾದರೂ ಗಾದೆ ಸುಳ್ಳಾಗದು
- ಅಡಿಕೆಗೆ ಹೋದ ಮಾನ ಆನೆ ಕೊಟ್ಟರೂ ಬರುವುದಿಲ್ಲ
- ಕುಂಬಾರನಿಗೆ ವರುಷ, ದೊಣ್ಣೆಗೆ ನಿಮಿಷ
- ಎತ್ತು ಏರಿಗೆ ಎಳೆಯಿತು, ಕೋಣ ನೀರಿಗೆ ಎಳೆಯಿತು
- ಎತ್ತಿಗೆ ಜ್ವರ ಬಂದರೆ, ಎಮ್ಮಗೆ ಬರೆ ಹಾಕಿದಂತೆ
- ಕೈಕೆಸರಾದರೆ ಬಾಯಿ ಮೊಸರು
- ನಾಯಿ ಬೊಗಳಿದರೆ ದೇವಲೋಕ ಹಾಳಾಗುತ್ತದೆಯೇ?
- ಹೆಣ್ಣಿಗೆ ಹಟವಿರಬಾರದು, ಗಂಡಿಗೆ ಚಟವಿರಬಾರದು
- ಮಾತು ಬೆಳ್ಳಿ, ಮೌನ ಬಂಗಾರ
- ಮಾತು ಮನೆ ಕೆಡಿಸಿತು, ತೂತು ಒಲೆ ಕೆಡಿಸಿತು
- ಮಂಗ ಮೊಸರು ತಿಂದು ಮೇಕೆ ಬಾಯಿಗೆ ಸವರಿದಂತೆ
- ಮನೆಗೆ ಮಾರಿ ಊರಿಗೆ ಉಪಕಾರಿ
- ಆಳಾಗಬಲ್ಲವನು ಅರಸನಾಗಬಲ್ಲ
- ಊರಿಗೆ ದೊರೆ ಆದರೂ ತಾಯಿಗೆ ಮಗನೇ
- ಹೆತ್ತವರಿಗೆ ಹೆಗ್ಗಣ ಮುದ್ದು
- ಊರೆಲ್ಲ ದೋಚಿಹೋದ ಮೇಲೆ ಕೋಟೆ ಬಾಗಿಲು ಹಾಕಿದರಂತೆ
- ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೆ?
- ಮಾಡೋದೆಲ್ಲಾ ಅನಾಚಾರ ಮನೆಯ ಮುಂದೆ ಬೃಂದಾವನ
- ಮನಸ್ಸಿದ್ದರೆ ಮಾರ್ಗ
- ಅಡ್ಡಗೋಡೆಯ ಮೇಲೆ ದೀಪ ಇಟ್ಟ ಹಾಗೆ
- ಆರಕ್ಕೇರಲಿಲ್ಲ ಮೂರಕ್ಕಿಳಿಯಲಿಲ್ಲ
- ಆರು ಕೊಟ್ಟರೆ ಅತ್ತೆ ಕಡೆ, ಮೂರು ಕೊಟ್ಟರೆ ಸೊಸೆ ಕಡೆ
- ಅಕ್ಕಿ ಮೇಲೂ ಆಸೆ, ನೆಂಟರ ಮೇಲೂ ಪ್ರೀತಿ
- ಎಣ್ಣೆ ಬಂದಾಗ ಕಣ್ಣು ಮುಚ್ಚಿಕೊಂಡಂತೆ
- ಅತ್ತೆಗೊಂದು ಕಾಲ, ಸೊಸೆಗೊಂದು ಕಾಲ
ವಿದ್ಯಾರ್ಥಿ ಕಿರುಪರಿಚಯ | |
ಕುಮಾರಿ ಹಾಸಿನಿಕೆ 5ನೇ ತರಗತಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ, ಇಟಕದಿಬ್ಬನ ಹಳ್ಳಿ, ಮಧುಗಿರಿ ತಾಲ್ಲೂಕು, ತುಮಕೂರು ಜಿಲ್ಲೆ. Blog | Facebook | Twitter |
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ