ಶನಿವಾರ, ನವೆಂಬರ್ 23, 2019

ಹೆಸರಘಟ್ಟ ಕೆರೆ ಇತಿಹಾಸ

ಚಿತ್ರ ಕೃಪೆ: ಡೆಕ್ಕನ್ ಹೆರಾಲ್ಡ್

ಹೆಸರಘಟ್ಟ ಕೆರೆ ಬೆಂಗಳೂರಿನ ಉತ್ತರ ದಿಕ್ಕಿನಲ್ಲಿ, ಕೆಂಪೇಗೌಡ ಬಸ್ ನಿಲ್ದಾಣ ಮತ್ತು ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ರೇಲ್ವೇ ನಿಲ್ದಾಣದಿಂದ ಸುಮಾರು 25 ಕಿ.ಮೀ. ದೂರದಲ್ಲಿದೆ. ಹಿಂದೆ ಈ ಕೆರೆಯು ಕೆಲವು ವರ್ಷಗಳ ಕಾಲ ಬೆಂಗಳೂರಿಗೆ ಕುಡಿಯುವ ನೀರನ್ನು ಪೂರೈಸುತ್ತಿತ್ತು. ಕ್ರಿ.ಶ. 1532ರ ಸುಮಾರಿಗೆ ಹೆಸರಘಟ್ಟದ ಕೆರೆ ನಿರ್ಮಾಣವಾಯಿತು ಎನ್ನಲಾಗುತ್ತದೆ. ಅರ್ಕಾವತಿ ನದಿಯ ನೀರೇ ಹೆಸರಘಟ್ಟ ಕೆರೆಯ ನೀರಿನ ಮೂಲ.

19ನೇ ಶತಮಾನದ ಅಂತ್ಯಕ್ಕೆ ಬೆಂಗಳೂರು ನಗರ ವೇಗವಾಗಿ ಬೆಳೆಯಲಾರಂಭಿಸಿತು. ಆಗ ನಗರಕ್ಕೆ ನೀರುಣಿಸುತ್ತಿದ್ದುದು ಧರ್ಮಾಂಬುಧಿ, ಸಂಪಂಗಿ, ಅಲಸೂರು ಮತ್ತು ಸ್ಯಾಂಕಿ ಕೆರೆಗಳು. ಆದರೆ, ವೇಗವಾಗಿ ಬೆಳೆಯುತ್ತಿದ್ದ ಬೆಂಗಳೂರಿಗೆ ಈ ಕೆರೆಗಳ ನೀರೂ ಸಾಕಾಗಲಿಲ್ಲ. ಹೀಗಾಗಿ ಆಗಿನ ದಿವಾನರಾಗಿದ್ದ ಕೆ. ಶೇಷಾದ್ರಿ ಅಯ್ಯರ್ 1894ರಲ್ಲಿ ಹೆಸರಘಟ್ಟ ಕೆರೆಯಿಂದ ಬೆಂಗಳೂರಿಗೆ ನೀರು ಸರಬರಾಜು ಮಾಡುವ ಯೋಜನೆ ರೂಪಿಸಿದರು. ಆಗಿನ ಮೈಸೂರು ರಾಜ್ಯದ ಮುಖ್ಯ ಎಂಜಿನಿಯರ್ ಎಂ. ಸಿ. ಹಚಿನ್ಸನ್ ತಾಂತ್ರಿಕ ನೆರವು ನೀಡಿದರು.

ಬೆಂಗಳೂರಿನ ಆಗಿನ ಜನಸಂಖ್ಯೆ ಕೇವಲ ಎರಡು ಲಕ್ಷ ಐವತ್ತು ಸಾವಿರ. ಒಬ್ಬ ವ್ಯಕ್ತಿಗೆ ದಿನಕ್ಕೆ 55 ಲೀಟರಿನಂತೆ ಸತತ 37 ವರ್ಷ ಕಾಲ ನೀರು ಸರಬರಾಜು ಮಾಡಿದ ಹಿರಿಮೆ ಹೆಸರಘಟ್ಟ ಕೆರೆಯದ್ದು. ಹೆಸರಘಟ್ಟ ಕೆರೆಗೆ ನೀರು ಹರಿದು ಬರುತ್ತಿದ್ದ ಜಲಾನಯನ ಪ್ರದೇಶದಲ್ಲಿ ಒತ್ತುವರಿ, ಕೃಷಿ ಹಾಗೂ ಕೈಗಾರಿಕೆ ಚಟುವಟಿಕೆಗಳಿಂದ ಮಳೆ ನೀರು ಹರಿದು ಬರುವ ಮಾರ್ಗ ಕುಗ್ಗುತ್ತಾ ಬಂದು ಈಗ ಕೆರೆಯಲ್ಲಿ ನೀರು ಕಡಿಮೆಯಾಗಿದೆ.

ವಿದ್ಯಾರ್ಥಿ ಕಿರುಪರಿಚಯ
ಸೂರ್ಯ, ಎಚ್. ಎನ್.

9ನೇ ತರಗತಿ
ಜ್ಯೋತಿ ವಿದ್ಯಾಲಯ ಶಿಕ್ಷಣ ಸಂಸ್ಥೆ,
ಹೆಸರಘಟ್ಟ, ಬೆಂಗಳೂರು ಉತ್ತರ ತಾಲ್ಲೂಕು, ಬೆಂಗಳೂರು ನಗರ ಜಿಲ್ಲೆ.

Blog  |  Facebook  |  Twitter

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ